ಗ್ರಾಮ ಪಂಚಾಯತ್ ಮಟ್ಟದಲ್ಲಿ ವೀಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಮತ್ತು ಅಜೀವಿಕಾ ಮಿಷನ್ (VB-RAMG) ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಶಾಸಕರು ಡಾ. ಸಿದ್ದಲಿಂಗಪ್ಪ ಪಾಟೀಲ್ ಆದೇಶಿಸಿದರು.
ಪಟ್ಟಣದ ಶಾಸಕರ ಭವನದಲ್ಲಿ ಶಾಸಕ ಡಾ. ಸಿದ್ದಲಿಂಗಪ್ಪ ಪಾಟೀಲ್ ಅಧ್ಯಕ್ಷತೆಯಲ್ಲಿ ತಹಸೀಲ್ದಾರ್, ಹೊಸ ನೇಮಕಗೊಂಡ ಗ್ರಾಮ ಪಂಚಾಯತ್ ಆಡಳಿತ ಅಧಿಕಾರಿ ಹಾಗೂ ಹುಮನಾಬಾದ, ಚಿಟ್ಟಗುಪ್ಪ, ಬಸವಕಲ್ಯಾಣ ತಾಲ್ಲೂಕಿನ ಅಧಿಕಾರಿಗಳು ಭಾಗವಹಿಸಿದ್ದರು. ಧುಮ್ಮನಸೂರದಲ್ಲಿ ಕಿಡ್ನಿ ಸಂಬಂಧಿ ಸಮಸ್ಯೆಗಳು ಹೆಚ್ಚಾಗಿವೆ ಎಂದು ಗಮನಿಸಿದ ಅವರು, ತಿಂಗಳಿಗೆ ಒಂದೇ ಬಾರಿ ನೀರು ಪರೀಕ್ಷೆ ನಡೆಸುವಂತೆ ಸೂಚಿಸಿದರು. ಎಲ್ಲಾ ಕುಡಿಯುವ ನೀರಿನ ಮೂಲಗಳನ್ನು ಪರಿಶೀಲಿಸಿ, ಗ್ರಾಮೀಣ ಜನರಿಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡಲು ಅಧಿಕಾರಿಗಳು ಜವಾಬ್ದಾರಿತನದಿಂದ ಕೆಲಸ ಮಾಡಬೇಕು ಎಂದು ಹೇಳಿದರು.
ಶಾಸಕರು ಪಿಡಿಓಗಳ ಸಭೆಗಳನ್ನು ನಿಯಮಿತವಾಗಿ ನಡೆಸಿ, ಹಳ್ಳಿಗಳಲ್ಲಿಗೆ ಭೇಟಿ ನೀಡಿ, ಅಗತ್ಯವಿರುವಲ್ಲಿ ಮಾತ್ರ ಕೊಳವೆ ಬಾವಿ ತೆರೆಯಲು ಸೂಚಿಸಿದರು. ಕುಡಿಯುವ ನೀರಿನ ಪೈಪ್ಲೈನ್ ಬಗ್ಗೆ ಮಾಹಿತಿಯನ್ನು ವಾಟರ್ಮ್ಯಾನ್ ಮೂಲಕ ಸಂಗ್ರಹಿಸುವಂತೆ ಹೇಳಿ, ನೀರಿನ ಸಮಸ್ಯೆ ಎದುರಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಹೇಳಿದರು. ಸರ್ಕಾರದ ಯೋಜನೆಗಳು ಜನರಿಗೆ ತಲುಪಲು ಅಧಿಕಾರಿಗಳು ಪ್ರಾಮಾಣಿಕವಾಗಿ ಸೇವೆ ಸಲ್ಲಿಸಬೇಕು; ಗ್ರಾಮೀಣ ಅಭಿವೃದ್ಧಿ ಸ್ಥಳೀಯ ಆಡಳಿತದ ಕಾರ್ಯಕ್ಷಮತೆಗೆ ಅವಲಂಬಿತವಾಗಿದೆ ಎಂದು ಮನವಿ ಮಾಡಿದರು. ನಿಷ್ಕಾಳಜಿ ತೋರೆ ಆರೋಪಿಗಳಿಗೆ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.
ಹುಮನಾಬಾದ ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ದೀಪಿಕಾ ನಾಯ್ಕಲ್ ವರದಿ ಮಾಡಿದಂತೆ, ಮೋಳಕೇರಾ ಮತ್ತು ಡಾಕುಳಗಿ ಭಾಗದ ಬೋರವೆಲ್ಸ್ ಕುಡಿಯುವ ನೀರಿಗೆ ಯೋಗ್ಯವಿಲ್ಲ. ಗ್ರಾಮ ಪಂಚಾಯತ್ ಸಂಜೀವಿನಿ ಯೋಜನೆ ಅಡಿಯಲ್ಲಿ ಗ್ರಾಮೀಣ ಮಹಿಳೆಯರಿಗೆ ಸ್ವಚ್ಛ ವಾಹಿನಿ ಚಾಲಕರಾಗಿ ಉದ್ಯೋಗಾವಕಾಶ ಮತ್ತು ತರಬೇತಿ ನೀಡಲಾಗಿದೆ. ಮಹಿಳೆಯರಿಗೆ ವಾಹನ ಚಾಲನೆ ಅವಕಾಶ ದೊರೆಯುತ್ತಿದ್ದು, ಪ್ರತಿ ತಿಂಗಳು ಚಾಲಕರಿಗೆ ₹3,000 ಹಾಗೂ ಸಹಾಯಕರಿಗೆ ₹2,000 ರೂಪಾಯಿ ಪೂರೈಕೆ ಮಾಡಲಾಗುತ್ತಿದೆ. ಪ್ರತಿ ಮನೆ ದಿನಕ್ಕೆ ₹1 ಕೊಟ್ಟು, ಇಂಧನ ಮತ್ತು ಇತರೆ ಬಳಕೆ ಹಾಗೂ ಕಸ ವಿಲೇವಾರಿ ಮೂಲಕ ಸ್ವಾವಲಂಬಿ ಜೀವನಕ್ಕೆ ಸಹಾಯ ಮಾಡಲಾಗುತ್ತದೆ.
ಸಭೆಯಲ್ಲಿ ಹುಮನಾಬಾದ ತಹಸೀಲ್ದಾರ್ ಅಂಜುಮ್ ತಬಸುಮ್, ಚಿಟ್ಟಗುಪ್ಪ ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೀ ಬಿರಾದಾರ್, ಬಸವಕಲ್ಯಾಣ ರಮೇಶ್, ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕ ನಿಂಗರಾಜ ಅರಸ, ಹಿಂದುಳಿದ ವರ್ಗ ಅಧಿಕಾರಿ ವಿಠಲರಾವ್, ನೀರು ಸರಬರಾಜು, ತೋಟಗಾರಿಕೆ ಮತ್ತು ಕೃಷಿ ಇಲಾಖೆಗಳ ಸಿಬ್ಬಂದಿ ಇದ್ದರು.